ಮೋಡ ತಡೆದು
ಮಳೆ ಸುರಿಸಿದ
ಬೆಟ್ಟಕ್ಕೆ
ನೀರಿನ ಅಭಾವ.
ಬೆಟ್ಟದಿಳಿಜಾರಿನಲಿ
ನೀರು ನಿಲ್ಲಲು
ಸಾಧ್ಯವೆ?
ತಡೆಗೋಡೆ ವಿರಳ.
ಕೆಳಗೆಲ್ಲೋ
ಕಟ್ಚಲೂ ಬಹುದೊಂದು
ಅಣೆಕಟ್ಟು
ಅದಕ್ಕೇನು ಲಾಭ?
ಆದರೂ ಅದಕ್ಕೆ
ನಿಶ್ಚಿಂತೆ
ಇಲ್ಲ ಕಿಂಚಿತ್ತು
ಹಸಿರಿನ ಕೊರತೆ.
ಕುಡಿಯಲು ನೀರು
ಉರಿಬಿಸಿಲಿಗೆ ನೆರಳು
ಕಲ್ಲುಗುಂಡುಗಳಡಿ
ಬೀಸುವ ತಂಗಾಳಿ.
ಇಲ್ಲಿ ಜಾರುವ ಕವಿಗೂ
ಉಂಟು ಒಂದು ಸ್ಧಾನ.
Wednesday, July 23, 2008
Subscribe to:
Post Comments (Atom)
0 comments:
Post a Comment